ಆನೆಯ ನೋಡಿರಯ್ಯ ನೀವೆಲ್ಲರು
ಆನಂದ ಪಡೆಯಿರಯ್ಯ
ತಾನು ತನ್ನವರೆಂಬ ಮಾನವರ ಸಲಹಿದ
ಪಾಂಡು ಚಕ್ರೇಶನ ಸುತಗೆ ಒಲಿದಾನೆ
ಗಂಡುಗಲಿ ಮಾಗಧನ ಒರಸಿದಾನೆ
ಹಿಂಡು ಗೋವಳರೊಳು ಹಿರಿಯನ ಕಳೆಯದಾನೆ
ಲಂಡರಿಗೆ ಎದೆಗೊಡುವ ಪುಂಡ ಆನೆ || 1 ||
ಬಾಲಕನ ನುಡಿ ಕೇಳಿ ಖಳನ ಸೀಳಿದಾನೆ
ಪಾಲುಂಡು ವಿದುರನ ಸಲಹಿದಾನೆ
ಲೋಲಾಕ್ಷಿಯ ಮಾನಭಂಗಕ್ಕೊದಗಿದಾನೆ
ಖೂಳ ಶಿಶುಪಾಲನ ಸೀಳಿದಾನೆ || 2 ||
ಅಜಮಿಳಗೆ ನಿಜಪದವಿಯ ಕೊಟ್ಟಾನೆ
ಕುಜನರೆಲ್ಲರನು ವರ್ಜಿಸಿದಾನೆ
ಅಜಪಿತ ಕಾಗಿನೆಲೆಯಾದಿಕೇಶವನೆ
ತ್ರಿಜಗವಲ್ಲಭ ತಾನು ಭಜಕರ ವಶದಾನೆ || 3 ||
ಶ್ರೀ ಭರತೀರಮಣ ಮುಖ್ಯಪ್ರಾಣಾಂತರ್ಗತ ಶ್ರೀಕೃಷ್ಣಾರ್ಪಣಮಸ್ತು
No comments:
Post a Comment