Saturday, August 5, 2017

ಆರಿಗಿಲ್ಲ ಆಪತ್ಕಾಲದೊಳಗೆ ( ರಾಗ - ಕಾಂಬೋಧಿ, ತಾಳ - ಝಂಪೆ )


ಆರಿಗಿಲ್ಲ ಆಪತ್ಕಾಲದೊಳಗೆ || ||
ವಾರಿಜಾಕ್ಷನ ನಾಮ ನೆನೆ ಕಂಡ್ಯ ಮನವೆ || . ||

ಹಸಿದು ಬಳಲುವಾಗ ಹಗೆ ಕೈಗೆ ಸಿಲುಕಿದಾಗ
ದೆಸೆಗೆಟ್ಟು ಅಧಿಕ ವ್ಯಾಧಿಯಲಿ ಇರುವಾಗ
ಅಸಮಾನನಾದಾಗ ಅತಿ ಭೀತಿಗೊಂಡಾಗ
ಬಿಸಜನಾಭನ ನಾಮ ನೆನೆಕಂಡ್ಯ ಮನವೆ || ||

ಸಾಲದವರೆಳೆವಾಗ ಚಾಡಿ ಮಾತಿಗೆ ಭೂಪ
ಘುಳುಘುಳಿಸುತ ಕೋಪವನ್ನು ತೋರಿದಾಗ
ಮೇಲು ತಾನರಿಯದಯೆ ನಿಂದೆ ಹೊಂದಿರುವಾಗ
ನೀಲಮೇಘಶ್ಯಾಮನ ನೆನೆಕಂಡ್ಯ ಮನವೆ || ||

ಪಂಥದಲಿರುವಾಗ ಪದವಿ ತಪ್ಪಿರುವಾಗ
ದಂತಿ ಮದವೇರಿ ಬೆನ್ಹತ್ತಿದಾಗ
ಕಂತುಪಿತಕಾಗಿನೆಲೆಯಾದಿಕೇಶವ ನಿ
ಶ್ಚಿಂತೆಯಿಂದಲಿ ನೀನು ನೆನೆಕಂಡ್ಯ ಮನವೆ || ||

ಶ್ರೀ ಭರತೀರಮಣ ಮುಖ್ಯಪ್ರಾಣಾಂತರ್ಗತ ಶ್ರೀಕೃಷ್ಣಾರ್ಪಣಮಸ್ತು

No comments:

Post a Comment