Sunday, August 13, 2017

ಆರು ಹಿತವರು ಎಂದು ನಂಬಬೇಡ ( ರಾಗ - ಕಾಂಬೋದಿ, ತಾಳ - ಝಂಪೆ )

ಆರು ಹಿತವರು ಎಂದು ನಂಬಬೇಡ ||  ||
ಆರಿಗಾರಿಲ್ಲ ಆಪತ್ತು ಬಂದೊದಗಿದಡೆ || . ||

ಜನಕ ಹಿತವೆಂದು ನಂಬಬಹುದೇ ಹಿಂದೆ
ತನಯ ಪ್ರಹ್ಲಾದನಿಗೆ ಪಿತ ಮುನಿದನು
ಜನನಿ ರಕ್ಷಿಪಳೆಂತೆಂಬೆನೇ  ಕುಂತಿ
ತನಯ ರಾಧೇಯನಿಗೆ ಎರಡೆಣಿಸಿದ ಮೇಲೆ ||  ||

ಮಗನು ತೆತ್ತಿಗನೆನಲೆ ಕಂಸ ತನ್ನಯ ಪಿತನ
ನಿಗಳ ಬಂಧನದಿಂದ ಬಂಧಿಸಿದನು
ಜಗವರಿಯೆ ಸೋದರನು ಮಮತೆಯುಳ್ಳವನೆನಲೆ
ಹಗೆವೆರಸಿ ವಾಲಿಯನು ಅನುಜ ಕೊಲಿಸಿದ ಮೇಲೆ ||  ||

ತನಗೆ ದೇಹಾನುಬಂಧುಗಳೆ ಬಂಧುಗಳೆಂದು
ಮನದಿ ನಿಚ್ಚಳವಾಗಿ ನಂಬಬೇಡ
ಘನಕೃಪಾನಿಧಿ ಕಾಗಿನೆಲೆಯಾದಿಕೇಶವನ
ಅನುದಿನ ನಂಬಿದವಗಿಹಪರದಿ ಸುಖವು ||  ||

ಶ್ರೀ ಭರತೀರಮಣ ಮುಖ್ಯಪ್ರಾಣಾಂತರ್ಗತ ಶ್ರೀಕೃಷ್ಣಾರ್ಪಣಮಸ್ತು

No comments:

Post a Comment