Saturday, August 5, 2017

ಆರು ಬಲ್ಲರು ಹರಿ ಹರರ ಮಹಿಮೆಯನು ( ರಾಗ - ಕಾಂಬೋಧಿ, ತಾಳ - ಝಂಪೆ )


ಆರು ಬಲ್ಲರು ಹರಿ ಹರರ ಮಹಿಮೆಯನು
ವಾರಿಜೋದ್ಭವ ಸುರೇಂದ್ರಾದಿಗಳಿಗಳವಲ್ಲ || ||

ಪೌರತ್ರಯ ಗೆಲುವ ಸಮಯದಲಿ ತಪವಮಾಡಿ
ನಾರಾಯಣಾಸ್ತ್ರವನು ಪಡೆದನೀಶ
ಗೌರೀಮನೋಹರನ ಘನತರಾರ್ಚನೆಗೈದು
ಚಾರುತರ ಚಕ್ರವನು ಪಡೆದನಾ ಶೌರಿ || ||

ಬಲಿ ಚಕ್ರವರ್ತಿ ಭಕ್ತಿಗೆ ಮೆಚ್ಚಿ ಅವನ ಬಾ-
ಗಿಲಕಾಯ್ದನಚ್ಯುತನು ಅನುಗಾಲದಿ
ಬಲುಭುಜನ ಬಾಣಾಸುರನ ಗೃಹದ್ವಾರವನು
ಬಳಸಿ ಕಾಯ್ದನು ಹರನು ವರವ ತಾನಿತ್ತು || ||

ಭೋಗಿಶಯನನು ಆಗಿ ಭೋಗಿಭೂಷಣನಾಗಿ
ವಾಗೀಶನಾಗಿ ಸೃ್ಷ್ಠಿ ಸ್ಥತಿ ಲಯಗಳಿಂಗೆ
ಆಗು ಕಾರಣ ಕಾರ್ಯ ಕರ್ಮಾದಿ ರೂಪಕ್ಕೆ
ಕಾಗಿನೆಲೆಯಾದಿಕೇಶವನ ಮಹಿಮೆಯನು || ||

ಶ್ರೀ ಭರತೀರಮಣ ಮುಖ್ಯಪ್ರಾಣಾಂತರ್ಗತ ಶ್ರೀಕೃಷ್ಣಾರ್ಪಣಮಸ್ತು

No comments:

Post a Comment