Saturday, August 5, 2017

ಆರು ಬಾಳಿದರೇನು ಆರು ಬದುಕಿದರೇನು ( ರಾಗ - ಮೋಹನ, ತಾಳ - ಅಟ )


ಆರು ಬಾಳಿದರೇನು ಆರು ಬದುಕಿದರೇನು
ನಾರಾಯಣನ ಸ್ಮರಣೆ ನಮಗಿಲ್ಲದನಕ || ||

ಉಣ್ಣ ಬರದವರಲ್ಲಿ ಊರೂಟವಾದರೆ ಏನು
ಹಣ್ಣು ಬಿಡದ ಮರಗಳು ಹಾಳಾದರೇನು
ಕಣ್ಣಿಲ್ಲದವಗಿನ್ನು ಕನ್ನಡಿಯಿದ್ದು ಫಲವೇನು
ಪುಣ್ಯವಿಲ್ಲದವನ ಪ್ರೌಢಿಮೆ ಮೆರೆದರೇನು ? || ||

ಅಕ್ಕರಿಲ್ಲದವಗೆ ಮ್ಕಳಿದ್ದು ಫಲವೇನು
ಹೊಕ್ಕು ನಡೆಯದ ನಂಟತನದೊಳೇನು
ರೊಕ್ಕವಿಲ್ಲದವಗೆ ಬಂಧುಗಳು ಇದ್ದರೇನು
ಮರ್ಕಟನ ಕೈಯೊಳಗೆ ಮಾಣಿಕ್ಯವಿದ್ದರೇನು ? || ||

ಅಲ್ಪದೊರೆಗಳ ಜೀತ ಎಷ್ಟು ಮಾಡಿದರೇನು
ಬಲ್ಪಂಥವಿಲ್ಲದವನ ಬಾಳ್ವೆಯೇನು
ಕಲ್ಪಕಲ್ಪಿತ ಕಾಗಿನೆಲೆಯಾದಿಕೇಶವನ
ಸ್ವಲ್ಪವೂ ನೆನೆಯದ ನರನಿದ್ದರೇನು ? || ||

ಶ್ರೀ ಭರತೀರಮಣ ಮುಖ್ಯಪ್ರಾಣಾಂತರ್ಗತ ಶ್ರೀಕೃಷ್ಣಾರ್ಪಣಮಸ್ತು

No comments:

Post a Comment