Friday, August 25, 2017

ಅನುಗಾಲವು ಚಿಂತೆ ಜೀವಕೆ ( ರಾಗ - ಕಾನಡ, ತಾಳ - ಅಟ್ಟ )


ಅನುಗಾಲವು ಚಿಂತೆ ಜೀವಕೆ ತನ್ನ
ಮನವು ಶ್ರೀರಂಗನೊಳ್ ಮೆಚ್ಚುವ ತನಕ || ||

ಸತಿಯು ಇದ್ದರು ಚಂತೆ ಸತಿಯು ಇಲ್ಲದ ಚಿಂತೆ
ಮತಿಹೀನ ಸತಿಯಾದರೂ ಚಿಂತೆಯು
ಪೃಥವಿಯೊಳಗೆ ಸತಿ ಅತಿ ಚೆಲ್ವೆಯಾದರೆ
ಮಿತಿ ಮೇರೆಯಿಲ್ಲದ ಮೋಹದ ಚಿಂತೆ || ||

ಪುತ್ರರಿದ್ದರು ಚಿಂತೆ ಪುತ್ರರಿಲ್ಲದ ಚಿಂತೆ 
ಅತ್ತು ಅನ್ನಕೆ ಕಾಡುವ ಚಿಂತೆಯು
ತುತ್ತಿನ ಆಸೆಗೆ ತುರುಗಳ ಕಾಯ್ದರು
ಸುತ್ತೇಳು ಕಡೆಯಿಲ್ಲದ ಚಿಂತೆಯು || ||

ಬಡವನಾದರು ಚಿಂತೆ ಬಲಿದನಾದರು ಚಿಂತೆ
ಹಿಡಿ ಹೊನ್ನು ಕೈಯೊಳಿದ್ದರು ಚಿಂತೆಯು
ಪೊಡವಿಯೊಳಗೆ ಸಿರಿಪುರಂದರವಿಠಲನ
ಬಿಡದೆ ಧ್ಯಾನಿಸಿದರೆ ಚಿಂತೆ ನಿಶ್ಚಿಂತೆ || ||

ಶ್ರೀ ಭರತೀರಮಣ ಮುಖ್ಯಪ್ರಾಣಾಂತರ್ಗತ ಶ್ರೀಕೃಷ್ಣಾರ್ಪಣಮಸ್ತು

No comments:

Post a Comment